ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್ ಓಡಾಟ

ಊರಿಗೆ ಬಂದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನೂತನ ಬಸ್ ಅನ್ನು ಗುಳ್ಳಾಪುರ-ರಾಮನಗುಳಿ ಭಾಗದ ಮಕ್ಕಳು ಹಾಗೂ ಗ್ರಾಮಸ್ಥರು ಬರ ಮಾಡಿಕೊಂಡರು.

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯೂ ವಿವಿಧ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸಂಚಾರ ಶುರು ಮಾಡಿದೆ.
    ಗುಳ್ಳಾಪುರ, ರಾಮನಗುಳಿ, ಕೊಡ್ಲಗದ್ದೆ, ಅರಬೈಲ್, ಇಡಗುಂದಿ ಮಾರ್ಗವಾಗಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಬಸ್ ಓಡಾಟ ನಡೆಸುತ್ತಿದೆ. ಸೋಮವಾರ ಊರಿಗೆ ಆಗಮಿಸಿದ ಬಸ್ ಅನ್ನು ಗ್ರಾಮದ ಜನ ಪೂಜೆ ಮಾಡಿ ಬರಮಾಡಿಕೊಂಡರು.  ಈ ವೇಳೆ ಪಾಲಕರಾದ ಸುದಾಕರ ಭಟ್ಟ ಹೆಗ್ಗಾರ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಕಾಳಜಿ ವಹಿಸಿದೆ. ಪ್ರಸ್ತುತ ವಿಶೇಷ ಬಸ್ ಓಡಾಟ ನಡೆಸಿರುವುದರಿಂದ ಮಕ್ಕಳಿಗೆ ಅನುಕೂಲವಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಗ್ರಾಮದೇವಿ ದೇವಸ್ಥಾನದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ನರಸಿಂಹ ಕೋಣೆಮನೆ ಅವರು ಬಸ್ ಗೆ ಪೂಜೆ ಸಲ್ಲಿಸಿದರು.

ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ನರಸಿಂಹ ಕೋಣೆಮನೆ ಅವರು ನೂತನ ಬಸ್ ಗೆ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

Leave a Reply

Your email address will not be published. Required fields are marked *