ವಿಶ್ವದರ್ಶನ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿದ ಕಾಶಿನಾಥ ನಾಯ್ಕ

ಯಲ್ಲಾಪುರ: ಟೋಕಿಯೋ ಒಲೆಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಿರಜ್ ಚೋಪ್ರಾ ಅವರ ತರಬೇತುದಾರರಾದ ಕಾಶಿನಾಥ ನಾಯ್ಕ ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿದರು. ಸಭಾ

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅವರು ನಂತರ ಮಕ್ಕಳನ್ನು ಮೈದಾನಕ್ಕೆ ಕರೆದೊಯ್ದು ಜಾವೆಲಿನ್ ಎಸೆತ ಮಾಡಿಸಿದರು. “ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು. ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ ಯಾವುದೇ ವಿಶೇಷ ತರಬೇತುದಾರರು ಇರಲಿಲ್ಲ. ಆಗ ಅಲ್ಲಿನ ಸೈನಾಧಿಕಾರಿಗಳೇ ಮಾರ್ಗದರ್ಶನ ನೀಡಿದರು. ಹೀಗಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು. ಸಾಧನೆ ಮಾಡಬೇಕಾದರೆ ಕಷ್ಟಗಳು ಸಹಜ. ಕಷ್ಟಗಳನ್ನು ಮೀರಿ ಬದುಕಿದಾಗ ಮಾತ್ರ ಸಾಧನೆ ಸಾಧ್ಯ. ನನಗೂ ಸಾಕಷ್ಟು ಸಮಸ್ಯೆಗಳಿದ್ದವು. ಅದನ್ನು ಮೀರಿ ಗೆಲ್ಲಬೇಕು ಎಂಬ ಛಲ ಇತ್ತು. ಆ ಛಲವೇ ನನ್ನನ್ನು ಗೆಲ್ಲಿಸಿದೆ ಎಂದು ಹೇಳಿದರು. ಬನವಾಸಿಯಿಂದ ೫ಕಿ.ಮೀ ದೂರದ ಹಳ್ಳಿಯಲ್ಲಿ ಹುಟ್ಟಿದ ನಾನು ಮೊದಲು ಕೂಲಿ ಕೆಲಸ ಮಾಡುತ್ತಿದ್ದೆ. ನಂತರ ಬೇಕರಿಯಲ್ಲಿ ದುಡಿದೆ. ಅನೇಕ ಅಡೆತಡೆಗಳನ್ನು ಎದುರಿಸಿ, ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ಎಲ್ಲಡೆ ಗುರುತಿಸಿಕೊಂಡಿದ್ದೇನೆ ಎಂದರು. ಗ್ರಾಮೀಣ ಭಾಗದವರು ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುದು ಸುಳ್ಳು. ಸಾಧನೆ ಮಾಡಲು ಮುಖ್ಯವಾಗಿ ಸ್ಪರ್ಧಾತ್ಮಕ ಮನೋಭಾವನೆ ಅಗತ್ಯವಿದೆ. ಮಕ್ಕಳು ಮೊಬೈಲ್‌ನಲ್ಲಿ ಆಟ ಆಡುವ ಬದಲು ಮೈದಾನದಲ್ಲಿ ಆಡಿದರೆ ಆರೋಗ್ಯ ದೊರೆಯುತ್ತದೆ. ಸ್ವಂತಕ್ಕಾಗಿ ಮಾಡಿದರೆ ಸ್ವಾರ್ಥ ಎನಿಸುತ್ತದೆ. ದೇಶಕ್ಕಾಗಿ ಮಾಡಿದಾಗ ದೊರೆಯುವ ಗೆಲುವಿನ ಸಂಭ್ರಮಕ್ಕೆ ಇಡೀ ದೇಶ ಸಾಕ್ಷಿಯಾಗುತ್ತದೆ ಎಂದರು.

Leave a Reply

Your email address will not be published. Required fields are marked *